Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

KEA Recuirment : ಕರ್ನಾಟಕ ರಾಜ್ಯದಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ನೀಡಿರುವುದಾಗಿ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕರ್ನಾಟಕದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದಲ್ಲಿ 1000 ಗ್ರಾಮಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಘೋಷಿಸಲಾಗಿದೆ.

KEA Recuirment : ಕರ್ನಾಟಕದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದಲ್ಲಿ 1000 ಗ್ರಾಮಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಘೋಷಿಸಲಾಗಿದೆ. ಕೆಲಸ ಕಾರ್ಯಗಳನ್ನು ಚುರುಕುಗೊಳಿಸಲು ಮತ್ತು ಗ್ರಾಮೀಣ ಜನರಿಗೆ ಉತ್ತಮ ಆಡಳಿತವನ್ನು ಒದಗಿಸಲು 1000 ಗ್ರಾಮ ಲೆಕ್ಕಗಳ ನೇಮಕಾತಿಗೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ.ಈ ಉಪಕ್ರಮವು ಗ್ರಾಮೀಣಾಭಿವೃದ್ಧಿಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ.ಗ್ರಾಮೀಣ ಜನರಿಗೆ ಉತ್ತಮ ಆಡಳಿತ ಒದಗಿಸುವ ದಿಕ್ಕಿನಲ್ಲಿ ಇದು ಒಂದು ಮಹತ್ವದ ಹೆಜ್ಜೆಯಾಗಿದೆ.
ಕುಂದಾಪುರ ತಾಲೂಕಿನ ನೌಕರರ ಬೇಡಿಕೆಯ ಬಗ್ಗೆ ಪರಿಹಾರ ನೀಡುವ ಭರವಸೆ ನೀಡಿದ ಸಚಿವರು

KEA Recuirment

ಕುಂದಾಪುರ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಒಳಗೊಂಡಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜಿಸಲಾಗುತ್ತಿದೆ ಎಂದು ಶಾಸಕ ಕಿರಣ್ ಕುಮಾರ್ ಕೂಡ್ಲಿ ಅವರು ಆರೋಪ ವ್ಯಕ್ತಪಡಿಸಿದರು . “ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸ ಆಗುತ್ತಿಲ್ಲ. ಇದರಿಂದ ಜನರಿಗೆ ಸಮಸ್ಯೆ ಹೆಚ್ಚಾಗುತ್ತಿದೆ. ,” ಎಂದು ಟೀಕೆ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಇದರಲ್ಲಿ ಯಾವುದೂ ರಾಜಕೀಯ ಮಾಡುತ್ತಿಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳು ಖಾಲಿ ಇದ್ದವು ಅದರಲ್ಲಿನ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಶೇಕಡಾವಾರು ಹೇಳುವುದಾದರೆ 65ರಷ್ಟು ಸ್ಥಾನಗಳನ್ನು ಭರ್ತಿ ಮಾಡಲಾಗಿದೆ ಎಂದು ತಿಳಿಸಿದರು. . ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.

ನೇಮಕಾತಿ ಪ್ರಕ್ರಿಯೆ:

*ಅಧಿಸೂಚನೆ ಪ್ರಕಟವಾದ ನಂತರ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
*ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಈ ಉದ್ಯೋಗವನ್ನು ಭರ್ತಿ ಮಾಡುವ ಉದ್ದೇಶಗಳು ಏನು?

1)ಗ್ರಾಮೀಣ ಜನರಿಗೆ ಉತ್ತಮ ಆಡಳಿತ ಒದಗಿಸುವುದು.
2)ಕಂದಾಯ ಇಲಾಖೆಯ ಕೆಲಸಕಾರ್ಯಗಳನ್ನು ಚುರುಕುಗೊಳಿಸುವುದು.
3)ಸಾರ್ವಜನಿಕರಿಗೆ ಶೀಘ್ರ ಮತ್ತು ಪರಿಣಾಮಕಾರಿ ಸೇವೆ ಒದಗಿಸುವುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು :

1) ಯವುದೇ ಪದವಿ ಪೂರ್ಣಗೊಳಿಸಿರಬೇಕು.
2) ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಓದು, ಬರಹ ಮತ್ತು ಮಾತನಾಡುವ ಸಾಮರ್ಥ್ಯವಿರಬೇಕು.
3)ಕಂಪ್ಯೂಟರ್ ಜ್ಞಾನ ಉತ್ತಮವಾಗಿರಬೇಕು.
4) ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರಬೇಕು.

ಈ ಉದ್ಯೋಗವು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡಲು ಉತ್ಸುಕರಾಗಿರುವವರಿಗೆ ಉತ್ತಮ ಅವಕಾಶವಾಗಿದೆ. ಈ ಉದ್ಯೋಗವು ಸ್ಥಿರ ಮತ್ತು ಉತ್ತಮ ವೇತನ ನೀಡುತ್ತದೆ.ಈ ಉದ್ಯೋಗವು ಭವಿಷ್ಯದ ಬೆಳವಣಿಗೆಗೆ ಅವಕಾಶಗಳನ್ನು ಒದಗಿಸುತ್ತದೆ. ಅರ್ಜಿಯ ಸಲ್ಲಿಸಲು ಯಾವುದೇ ರೀತಿಯ ಅಧಿಸೂಚನೆ ಪ್ರಕಟ ಆಗಲಿಲ್ಲ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಂದಾಯ ಇಲಾಖೆಯ ವೆಬ್ಸೈಟ್ ಪರಿಶೀಲನೆ ಮಾಡುತ್ತೀರಿ.

Also Read: Mark Zuckerberg: ಭಾರತದ ಒಂದು ದೇವಾಲಯದೊಂದಿಗೆ ಜುಕರ್‌ ಬರ್ಗ್ ಮತ್ತು ಸ್ಟೀವ್ ಜಾಬ್ಸ್ ಗೆ ಇದೆ ವಿಶೇಷ ಸಂಪರ್ಕ

Leave a comment